ಬ್ರೇಕಿಂಗ್ ನ್ಯೂಸ್ ಬ್ರೇಕಿಂಗ್ ನ್ಯೂಸ್

ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

by 1 on | 2025-05-11 18:07:14

Share: Facebook | Twitter | Whatsapp | Linkedin | Visits: 135


ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ
ರೈತರಿಗೆ ಸಿಹಿ ಸುದ್ದಿ ಪ್ರಕಟಿಸಿದ ಹೆಸ್ಕಾಂ ಇಲಾಖೆ ಸರ್ಕಾರದ ಮಹತ್ವದ ಆದೇಶ


ಬಾಗಲಕೋಟೆ: ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಪ್ರಧಾನಮಂತ್ರಿ ಕುಸುಮ ಬಿ ಮತ್ತು ಸಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.

           ಪ್ರಧಾನಮಂತ್ರಿ ಕುಸುಮ ಬಿ ಯೋಜನೆಯಡಿ 50 ನೀರಾವರಿ ಪಂಪಸೆಟ್‍ಗಳ ಪೈಕಿ 24 ನೀರಾವರಿ ಪಂಪಸೆಟಗಳಿಗೆ ಸೌರಶಕ್ತಿ ಚಾಲಿತ ಪಂಪಸೆಟ್ ಅಳವಡಿಸಲಾಗಿದೆ. ಉಳಿದ ಫಲಾನುಭವಿಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯಿಂದ ರೈತರಿಗೆ ಹಗಲು ವೇಳೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಸೌರಮಿತ್ರ ಪೋರ್ಟಲ್ ಮೂಲಕ 1083 ರೈತರು ಸೋಲಾರ ಪಂಪಸೆಟ್ ಅಳವಡಿಸಿಕೊಳ್ಳಲು ನೋಂದಾಯಿಸಿಕೊಂಡಿದ್ದು, ಸ್ಥಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ.

           ಪ್ರಧಾನಮಂತ್ರಿ ಕುಸುಮ ಸಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 11 ವಿದ್ಯುತ್ ಉಪ ಕೇಂದ್ರಗಳ ಮೂಲಕ 28 ವಿದ್ಯುತ್ ಮಾರ್ಗಗಳನ್ನು ಸೌರೀಕರಣಗೊಳಿಸಲು ಉದ್ದೇಶಿಸಿ 55.89 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. 2025 ಮೇ ತಿಂಗಳಲ್ಲಿ ಮೊದಲ ಬಾರಿಗೆ ಮುಧೋಳ ತಾಲೂಕಿನ ಲೋಕಾಪೂರ ಉಪವಿಭಾಗದ 110/11 ಕೆವಿ ಹಲಕಿ ವಿದ್ಯುತ್ ಉಪ ಕೇಂದ್ರದಲ್ಲಿ 11 ಕೆವಿ ಮಾರ್ಗ ಸೌರೀಕರಣಗೊಳಿಸಿ ಚಾಲನೆ ನೀಡಲಾಗುವುದು. ಅದರಿಂದ 0.52 ಮೆಗಾ ವ್ಯಾಟ್ ಉತ್ಪಾದನೆಯಾಗಲಿದ್ದು, ಹಗಲು ವೇಳೆ ನಿರಂತರ 7 ತಾಸು ನೀರಾವರಿ ಮಾರ್ಗಕ್ಕೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment