Politics Local

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಜೆ ಟಿ ಪಾಟೀಲ ಭೇಟಿ, ಪರಿಹಾರದ ಭರವಸೆ

by 1 on | 2025-09-23 12:35:57

Share: Facebook | Twitter | Whatsapp | Linkedin | Visits: 102


ಮಳೆ ಹಾನಿ ಪ್ರದೇಶಕ್ಕೆ ಶಾಸಕ ಜೆ ಟಿ ಪಾಟೀಲ ಭೇಟಿ, ಪರಿಹಾರದ ಭರವಸೆ
ಮಳೆ ಹಾನಿ ಪ್ರದೇಶಕ್ಕೆ ಶಾಸಕ ಜೆ ಟಿ ಪಾಟೀಲ ಭೇಟಿ, ಪರಿಹಾರದ ಭರವಸೆ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ  ಸುರಿದ ಧಾರಾಕಾರ ಮಳೆಗೆ ಮನೆ ಹಾಗೂ ಬೆಳೆ ಹಾನಿ ಸಂಭವಿಸಿದ್ದು,ಹಾನಿಯಾದ ಪ್ರದೇಶಕ್ಕೆ ಶಾಸಕರು ಹಾಗೂ ಹಟ್ಟಿ ಚಿನ್ನದ ಗಣಿ ನಿಗಮ ನಿ,ಅಧ್ಯಕ್ಷರು ಜೆ ಟಿ ಪಾಟೀಲ ಭೇಟಿ ನೀಡಿ ವೀಕ್ಷಿಸಿದರು.

                 ಬಳಿಕ ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,                    ತಾಲೂಕಿನಾದ್ಯಂತ 25 ವರ್ಷಗಳಲ್ಲಿ ಕಂಡರಿಯದ ರೀತಿಯಲ್ಲಿ ಮಳೆಯಾಗಿದೆ 7.3 ಎಂ ಎಂ ಮಳೆ ಆಗಬೇಕಿತ್ತು,19.4 ಎಂ ಎಂ ಮಳೆ ಆಗಿದೆ,ಬೀಳಗಿ ಅಂಬೇಡ್ಕರ್ ನಗರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಇಲ್ಲಿನ ಜನರು ಇಡಿ ರಾತ್ರಿ ಮನೆಗೆ ನುಗ್ಗಿದ ನೀರು ಹೊರಗಡೆ ಹಾಕುವುದರ ಸಲುವಾಗಿ ಎಂಟು ಘಂಟೆ ಜಾಗರಣೆ ಮಾಡಿದ್ದಾರೆ,ಬೀಳಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದಲ್ಲಿ ಮನೆ,ಹಾಗೂ ರೈತ ಬೆಳೆಗಳು ಹಾಳಾಗಿವೆ,ಕನಿಷ್ಠ 50 ಕಿಂತ ಹೆಚ್ಚು ಮನೆಗಳು ಈ ಮಳೆಯಿಂದ ಬಾದಿತ ಆಗಿವೆ,ಕೆಲವು ಮನೆಗಳು 50% ಬಿದ್ದಿವೆ. ಪಿಡಿಒ ಹಾಗೂ ಲೆಕ್ಕಾಧಿಕಾರಿಗಳು ಮನೆ,ಹಾಗೂ ಬೆಳೆ ಹಾನಿ ಮಾಹಿತಿಯನ್ನು ಎರಡು ಮೂರು ದಿನಗಳಲ್ಲಿ ಪಡೆದುಕೊಂಡು ತಹಶೀಲ್ದಾರ ಅವರಿಗೆ ನೀಡಬೇಕು,ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳಿಗೆ ಕಳುಹಿಸಲು ಸೂಚಿಸಿದ್ದೇನೆ,ಇನ್ನು ಮಳೆಯ ವಾತಾವರಣ ಕಡಿಮೆ ಆಗಿಲ್ಲ,ಇದೆ ರೀತಿಯ ಮಳೆ ಮುಂದುವರೆದರೆ ಕಂಡರಿಯದಷ್ಟು ಹಾನಿ ಆಗುತ್ತದೆ,ಈಗಾಗಲೇ ರೈತರು ಬೆಳೆದ ಈರುಳ್ಳಿ,ಸೋಯಾಬಿನ,ಗೋವಿನ ಜೋಳದ ಬೆಳೆ ಹಾನಿಯಾಗಿದ್ದು,ಜಿಲ್ಲಾಧಿಕಾರಿಗಳ ಗಣಮಕ್ಕೆ ತಂದು ಸಂಪೂರ್ಣ ಸರ್ವೆ ಮಾಡಿಸಿ,ಹಾನಿ ಆಗಿರುವ ಮನೆ,ಬೆಳೆ ಕುರಿತು ಸರ್ಕಾರದ ಗಮನಕ್ಕೆ ತಂದು,ನಷ್ಟ ಪರಿಹಾರ ಕೊಡಿಸುವ ಭರವಸೆ ನೀಡಿದರು,

ಬೀಳಗಿ ಪಟ್ಟಣದಲ್ಲಿ ರಾಜಕಾಲುವೆ ಅವಶ್ಯಕತೆ ತುಂಬಾ ಇದ್ದು,ಈ ಕುರಿತು ಮುಖ್ಯಮಂತ್ರಿಗಳಿಗೆ 10.5 ಕೋಟಿ ರೂ, ಪ್ರಪೋಸಲ್ ಕೊಟ್ಟಿದ್ದು,ರಾಜಕಾಲುವೆಗೆ 6.5 ಕೋಟಿ ರೂ.ಬೇಕು,ಈ ಕುರಿತು ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ಮಾತನಾಡಿದ್ದೇನೆ,ರಾಜಕಾಲುವೆ ಇರದಿದ್ದಕ್ಕೆ ಪಟ್ಟಣದಲ್ಲಿನ ಮನೆಗಳಿಗೆ ನೀರು ನುಗ್ಗಿರುವುದರಿಂದ ಜನರು ಕಹಿ ಅನುಭವಿಸಿದ್ದು,ಇಡಿ ರಾತ್ರಿ ಮನೆಯಲ್ಲಿ ನೀರು ಹೊರಗಡೆ ಹಾಕಲು 8 ಗಂಟೆ ಜಾಗರಣೆ ಮಾಡಿದ್ದಾರೆ ಎಂದರು.

ಈ ವೇಳೆ ತಹಸೀಲ್ದಾರ್ ವಿನೋದ ಹತ್ತಳ್ಳಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ.ಪ, ಪಂ, ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಪ,ಪಂ.ಸದಸ್ಯ ಪಡಿಯಪ್ಪ ಕರಿಗಾರ,ಅಜ್ಜು ಬಾಯಿಸರಕಾರ,ಸಿದ್ದು ಸಾರಾವರಿ, ಬಸವರಾಜ್ ಹಳ್ಳದಮನಿ,ಹಾಗೂ ಸಂಗಪ್ಪ ಕಂದಗಲ್ಲ,ಮಹಾದೇವ ಹಾದಿಮನಿ,ಅನಿಲ್ ಗಚ್ಚಿನಮನಿ,ಪಾಂಡು ಮಮದಾಪುರ,ಹನಮಂತ ಗಚ್ಚಿನ ಮನಿ, ಸೇರಿ ಅನೇಕರು ಉಪಸ್ಥಿತರಿದ್ದರು.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment